ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತೆ ಶೋಭಾ ಹುಲ್ಮನಿಯವರು ಯಲ್ಲಾಪುರ ತಾಲೂಕಿನಲ್ಲಿ ಅಯೋಧ್ಯೆ ರಾಮಮಂದಿರ ವಾರ್ಷಿಕೋತ್ಸವ ಅಂಗವಾಗಿ ಪಟ್ಟಣದ ಬಸವೇಶ್ವರ ಭಕ್ತವೃಂದ ವತಿಯಿಂದ ಆಯೋಜಿಸಲಾಗಿದ್ದ ಶ್ರೀರಾಮಮೂರ್ತಿಯ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆ ವೇಳೆ ಏಕಾಏಕಿ ಕುಸಿದುಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ನಿಧನರಾಗಿರುವುದನ್ನು ವೈದ್ಯರು ತಿಳಿಸಿದರು. ಅವರು ಪತಿ, ಪುತ್ರ, ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಕಳೆದ ವರ್ಷ ತಹಶೀಲ್ದಾರ್ ಕಚೇರಿ ಎದುರು ಬೈಪಾಸ್ಗಾಗಿ ಆಗ್ರಹಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲೂ ಶೋಭಾ ಅವರು ಕುಸಿದು ಅಸ್ವಸ್ಥರಾಗಿದ್ದರು
Adv
---------
Wednesday, 22 January 2025
ಯಲ್ಲಾಪುರದಲ್ಲಿ ಮಾನ್ಯಶಾಸಕ ಶಿವರಾಮ ಹೆಬ್ಬಾರ್ ಹಾಗೂ ವಿಜಯ ಮಿರಾಶಿ ನೇತೃತ್ವದಲ್ಲಿ ಶ್ರೀರಾಮ ಮೂರ್ತಿಯ ಭವ್ಯ ಮೆರವಣಿಗೆ
ಯಲ್ಲಾಪುರ: ಜನವರಿ 22 ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಇಂದು, ಪಟ್ಟಣದ ಬಸವೇಶ್ವರ ಶ್ರೀರಾಮ ಭಕ್ತ ವೃಂದದ ವತಿಯಿಂದ ಆಯೋಜಿಸಲಾದ ರಾಮ ಮೂರ್ತಿಯ ಭವ್ಯ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಮಾನ್ಯ ಶಾಸಕರಾದ ಶಿವರಾಂ ಹೆಬ್ಬಾರ್, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ ಗ್ರಾಮದೇವಿ ದೇವಾಲಯದಲ್ಲಿ ಶ್ರೀರಾಮಚಂದ್ರ ಮೂರ್ತಿಗೆ ಪೂಜೆ ಸಲ್ಲಿಸಿ, ಭಕ್ತರೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.
ಪಟ್ಟಣದ ಗ್ರಾಮದೇವಿ ದೇವಾಲಯದಿಂದ ಪ್ರಾರಂಭವಾದ ಮೆರವಣಿಗೆಯು ಅಂಬೇಡ್ಕರ್ ವೃತ್ತದ ಬಳಿ ಹೋಗಿ ಬಸವೇಶ್ವರ ವೃತ್ತದಲ್ಲಿ ಸಂಪನ್ನಗೊಂಡಿತು. ಇಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು ಮತ್ತು ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು.
Subscribe to:
Posts (Atom)